ಹನುಮಂತಪುರ: 20 ನವಿಲು ಶಂಕಾಸ್ಪದ ಸಾವು
ಮಧುಗಿರಿ :ತಾಲ್ಲೂಕಿನ ಮಿಡಿಗೇಶಿ ಹೋಬಳಿ ಹನುಮಂತಪುರದಲ್ಲಿ ಎರಡು ದಿನಗಳ ಹಿಂದೆ 20 ನವಿಲುಗಳು ಮೃತಪಟ್ಟಿವೆ. ಗೋಮಾಳ ಜಾಗದಲ್ಲಿ ಆ.2 ರಂದು ಮೂರು ಗಂಡು, 17 ಹೆಣ್ಣು ನವಿಲುಗಳು ಮೃತಪಟ್ಟಿವೆ.
‘ಅಕ್ಕಪಕ್ಕದ ಮುಸುಕಿನಜೋಳ ಜಮೀನುಗಳಲ್ಲಿ ಬೆಳೆಯುತ್ತಾರೆ. ಬೆಳೆ ನಾಶ ಮಾಡುತ್ತವೆ ಎಂದು ಬೆಳೆಗೆ ಕೀಟನಾಶಕ ಸಿಂಪಡಿಸಿದ್ದರು. ಅವನ್ನು ತಿಂದು ಸತ್ತಿವೆ’ ಎಂದು ಗ್ರಾಮಸ್ಥರು ದೂರಿದ್ದಾರೆ.
ನವಿಲುಗಳ ಕಳೇಬರಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಎಸಿಎಫ್ ಮಲ್ಲಿಕಾರ್ಜುನ, ವಲಯ
ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಸಮೀಪ ಸತ್ತ ನವಿಲುಗಳು
ಅರಣ್ಯಾಧಿಕಾರಿ ಸುರೇಶ್, ಉಪ ಅರಣ್ಯ ವಲಯಾಧಿಕಾರಿ ಮುತ್ತುರಾಜು ಭೇಟಿ ನೀಡಿದರು.
ಡಿಸಿಎಫ್ ನೇತೃತ್ವದಲ್ಲಿ ತನಿಖೆ
ಬೆಂಗಳೂರು: ತುಮಕೂರುಜಿಲ್ಲೆ ಮಧುಗಿರಿ ತಾಲ್ಲೂಕು ಮಿಡಿಗೇಶಿಯ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟ ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನವಿಲುಗಳ ಸಾವಿನ ಪ್ರಕರಣ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ
ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.
‘ಮಲೆಮಹದೇಶ್ವರ ಬೆಟ್ಟ ದಲ್ಲಿ ಈಚೆಗೆ ಹುಲಿ, ಅದರ ನಾಲ್ಕು ಮರಿಗಳು ವಿಷ ಸೇವನೆಯಿಂದ ಮೃತಪಟ್ಟಿದ್ದವು.ನಂತರ ಕೋತಿ ಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದರು.ಯಾವುದೇ ವನ್ಯಜೀವಿ ಮೃತಪಟ್ಟರೂ ‘ಅಡಿಟ್’ ಮಾಡಿಸಬೇಕು, ತಕ್ಷಣ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ’ ಎಂದರು.